
ಬಂಟ್ವಾಳ: ದೇವಸ್ಥಾನವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
2004ರ ನವೆಂಬರ್ನಲ್ಲಿ ಬಡಗಬೆಳ್ಳೂರಿನ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ. ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್ ಶರೀಫ್ (44) ಬಂಧಿತ ಆರೋಪಿ.
ಈತನ ವಿರುದ್ಧ ಬಂಟ್ವಾಳ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಈತ ಕರ್ನಾಟಕ ಮತ್ತು ಕೇರಳ ರಾಜ್ಯದ ಹಲವಾರು ಕಡೆ ವಿಳಾಸ ಬದಲಾವಣೆ ಮಾಡಿಕೊಂಡು ಬಂಧನಕ್ಕೆ ಸಿಗದೆ ಕಾಸರಗೋಡಿನ ಪುತ್ತಿಗೆಯಲ್ಲಿ ವಾಸವಾಗಿದ್ದ.
ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
