
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಬೈಕ್ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.
ಈ ಘಟನೆಯಲ್ಲಿ ಮೃತಪಟ್ಟವರನ್ನು ಬಾಂಡ್ರಾವಿ ಗ್ರಾಮದ ಶಾಲೆಯ ಅತಿಥಿ ಶಿಕ್ಷಕ ರಂಗಪ್ಪ (43) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ರಾಂಪುರ ಠಾಣೆ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
