
ಬೈಂದೂರು: ಮೀನು ಸಾಗಿಸುವ ಇನ್ಸುಲೇಟರ್ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಆದರೆ ಈ ವಾಹನದಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.
ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್ ಹತ್ತಿರ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮಿನಿ ಇನ್ಸುಲೇಟರ್ವಾಹನದೊಳಗೆ ಮೀನು ತುಂಬಿರುವ ಟ್ರೇ ಗಳನ್ನು ಇರಿಸಿಕೊಂಡು ಮದ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು.
ಈ ಕುರಿತು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
