
ಮೂಡುಬಿದಿರೆ: ಬಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಮಹಿಳೆಗೆ ಕಪಾಳ ಮೋಕ್ಷ ಮಾಡಿದ ಘಟನೆ ನೀರುಡೆಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ.
ಪುತ್ತಿಗೆಯಲ್ಲಿರುವ ಆಳ್ವಾಸ್ ಹಾಸ್ಟೆಲ್ ಗೆ ಮುಚೂರಿನಿಂದ ಸುಮಾರು 15 ಮಂದಿ ಮಹಿಳೆಯರು ಶಾಲೊಮ್ ಬಸ್ ನಲ್ಲಿ ನಿತ್ಯ ಕೆಲಸಕ್ಕೆಂದು ಪುಯಾಣಿಸುತ್ತಿದ್ದರು. ತಮ್ಮ ಕೆಲಸ ಬೇಗ ಮುಗಿದರೆ ಮನೆಗೆ ಬೇರೊಂದು ಬಸ್ಸಿನಲ್ಲಿ ತೆರಳುತ್ತಿದ್ದರು. ಈ ಕುರಿತಂತೆ ನಿರ್ವಾಹಕನು ಪ್ರತೀ ದಿನ ಇದೇ ಬಸ್ಸಿನಲ್ಲಿ ಬರೆದಿದ್ದರೆ ರಿಯಾಯಿತಿ ದರದಲ್ಲಿ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಖ್ಯಾತೆ ತೆಗೆದಿದ್ದಾನೆ.
ಇದಕ್ಕೆ ಮಹಿಳಾ ಪ್ರಯಾಣಿರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಮಹಿಳೆಯ ಆಕ್ಷೇಪವನ್ನು ವಿರೋಧಿಸಿ ಮಹಿಳೆ ಜತೆ ವಾಗ್ವಾದ ನಡೆಸಿದ್ದ ನಿರ್ವಾಹಕ ಆಕೆಗೆ ಕಪಾಳ ಮೋಕ್ಷ ಮಾಡಿದ್ದ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಆರೋಪಿಯನ್ನು ಬುಧವಾರ ಬಂಧಿಸಲಾಗಿದ್ದು,ಆತನ ವಿರುದ್ಧ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ಕೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
