Home ಸುದ್ದಿಗಳು ಜಿರಿಬಾಮ್ ಜಿಲ್ಲೆಯಲ್ಲಿ ಹಿಂಸಾಚಾರ: ಓರ್ವನ ಹತ್ಯೆ

ಜಿರಿಬಾಮ್ ಜಿಲ್ಲೆಯಲ್ಲಿ ಹಿಂಸಾಚಾರ: ಓರ್ವನ ಹತ್ಯೆ

0
ಜಿರಿಬಾಮ್ ಜಿಲ್ಲೆಯಲ್ಲಿ ಹಿಂಸಾಚಾರ: ಓರ್ವನ ಹತ್ಯೆ

ಮಣಿಪುರ: ಬಿಷ್ಣುಪುರದ ಎರಡು ಸ್ಥಳಗಳಲ್ಲಿ ನಡೆಸಿದ ರಾಕೆಟ್‌ ದಾಳಿಯಲ್ಲಿ ಓರ್ವ ಮೃತಪಟ್ಟು, ಐವರಿಗೆ ಗಾಯಗಳಾಗಿತ್ತು. ಇದರ ಬೆನ್ನಲ್ಲೇ ಜಿರಿಬಾಮ್ ಜಿಲ್ಲೆಯಲ್ಲಿ ಹಿಂಸಾಚಾರ ನಡೆದು ಉಗ್ರರು ಸೇರಿ ಐವರು ಸಾವಿಗೀಡಾಗಿದ್ದಾರೆ.

ಜಿರಿಬಾಮ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ವರದಿಯಾದ ಹಿಂಸಾಚಾರದಲ್ಲಿ ನಾಲ್ವರು ಉಗ್ರರು ಮತ್ತು ಒಬ್ಬ ನಾಗರಿಕ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನಾಗರಿಕನನ್ನು ಅವನ ಮನೆಯೊಳಗೆ ಕೊಲ್ಲಲಾಯಿತು . ನಂತರ ನಡೆದ ಇದು ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಣಿಪುರದಲ್ಲಿ ನಿಯೋಜಿಸಲಾದ ಭದ್ರತಾ ಪಡೆಯ ಅಧಿಕಾರಿಯೊಬ್ಬರು ಸಾವಿಗೀಡಾದವರು ಕುಕಿ ಮತ್ತು ಮೈತಿ ಎರಡೂ ಸಮುದಾಯದವರು ಎಂಬ ವರದಿಗಳು ನಮ್ಮ ಬಳಿ ಇವೆ ಎಂದು ಹೇಳಿದ್ದಾರೆ.

ಕಳೆದ ಒಂದೂವರೆ ವರ್ಷಗಳಿಂದ ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ನಡೆಯುತ್ತಿದ್ದರೆ, ಇದೀಗ ನಡೆದ ಹಿಂಸಾಚಾರದಿಂದ ಕಳೆದ 5 ದಿನಗಳಲ್ಲಿ ಪರಿಸ್ಥಿತಿಯು ತೀವ್ರ ಉದ್ವಿಗ್ನವಾಗಿದೆ.

 

LEAVE A REPLY

Please enter your comment!
Please enter your name here