Home ಸುದ್ದಿಗಳು ರಾಜ್ಯ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯತೀಶ್‌.ಎನ್‌ ನೇಮಕ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯತೀಶ್‌.ಎನ್‌ ನೇಮಕ

0
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಯತೀಶ್‌.ಎನ್‌ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಸಿ.ಬಿ.ರಿಷ್ಯಂತ್‌ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ತಡರಾತ್ರಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್‌ಪಿಯಾಗಿ ಯತೀಶ್‌.ಎನ್‌ ನೇಮಕಗೊಂಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರವು 25 ಎಸ್‌ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಈ ೨೫ ಎಸ್‌ಪಿಗಳ ಪೈಕಿ ಸಿ.ಬಿ.ರಿಷ್ಯಂತ್‌ ಕೂಡ ಒಬ್ಬರಾಗಿದ್ದಾರೆ. ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ. ಅಲ್ಲಿ ಅವರು ವೈರ್‌ಲೆಸ್‌ ಎಸ್‌ಪಿಯಾಗಿ ಸೇವೆ ಸಲ್ಲಿಸಲಿದ್ದಾರೆ.

ಯತೀಶ್‌ ಎನ್‌ ಅವರು ಮಂಡ್ಯ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಮಂಡ್ಯ ಜಿಲ್ಲೆಯ ನೂತನ ಎಸ್‌ಪಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಅವರು ನೇಮಕಗೊಂಡಿದ್ದಾರೆ. ಇನ್ನು, ಸಿ.ಬಿ.ರಿಷ್ಯಂತ್‌ ಅವರು ಮೇ.2023 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

 

LEAVE A REPLY

Please enter your comment!
Please enter your name here