
ದಕ್ಷಿಣ ಕನ್ನಡ/ಉಡುಪಿ: ರಾಜ್ಯದಲ್ಲಿ ಮುಂಗಾರಿನ ಸಿಂಚನ ಅಲ್ಲಲ್ಲಿ ಆರಂಭವಾಗಿದೆ. ಈಗಾಗಲೇ ಮಳೆ ಆರಂಭವಾಗಿ ಅರ್ಧ ತಿಂಗಳು ಕಳೆಯುತ್ತಿತ್ತು. ಆದರೆ ಈ ಬಾರಿ ಮಾತ್ರ ಕೆಲವೆಡೆ ಮಾತ್ರ ಮಳೆಯಾಗುತ್ತಿದೆ. ನಿನ್ನೆಯಿಂದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಇಂದೂ ಕೂಡ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 4ದಿನಗಳ ಕಾಲ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಎ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
