Home Uncategorized ಕರಾವಳಿ ಭಾಗದಲ್ಲಿ ಇಂದಿನಿಂದ ಮುಂಗಾರು ಬಿರುಸು ಪಡೆಯುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಭಾಗದಲ್ಲಿ ಇಂದಿನಿಂದ ಮುಂಗಾರು ಬಿರುಸು ಪಡೆಯುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

0
ಕರಾವಳಿ ಭಾಗದಲ್ಲಿ ಇಂದಿನಿಂದ ಮುಂಗಾರು ಬಿರುಸು ಪಡೆಯುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಇದಿನಿಂದ ಮುಂಗಾರು ಆಗಮಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ 6ರಿಂದ 8ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಿದ್ದು, ಜೂನ್‌ 9ರಂದು ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಉತ್ತಮ ಗಾಳಿ-ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಕಲಬುರಗಿ, ಯಾದಗಿರಿ, ರಾಯಚೂರು, ಹಾಸನ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

LEAVE A REPLY

Please enter your comment!
Please enter your name here